ನನ್ನಗುರಿ ಜಯದ ಕಡೆಗೆ: ತಮ್ಮನ್ನು ಟ್ರಬಲ್ ಶೂಟರ್ ಎಂದು ಕರೆಯುತ್ತಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರು ತಮಗೆ ಇಷ್ಟ ಬಂದಂತೆ ಕರೆದುಕೊಳ್ಳುತ್ತಾರೆ. ಆದರೆ ಯಾರು ಏನಾದರೂ ಕರೆದುಕೊಳ್ಳಲಿ. ನಾನೊಬ್ಬ ಪಕ್ಷದ ಕಾರ್ಯಕರ್ತ. ನನ್ನ ಗುರಿ ಏನಿದ್ದರೂ ಗೆಲುವಿನ ಕಡೆಗೆ ಮಾತ್ರ. ಪಕ್ಷದ ಕಾರ್ಯಕರ್ತರಿಗೂ ಸಹ ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡಿ ಎಂದು ಸೂಚಿಸಿದ್ದೇನೆ’ ಎಂದರು.