ರಾಮನಗರ: ಸೋಮವಾರ ಕನಕಪುರ ತಾಲ್ಲೂಕಿನ ಹಾರೋಹಳ್ಳಿಗೆ ಆಗಮಿಸಿದ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು.
ಪಟ್ಟಣದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಶಿವಕುಮಾರ್ ಕಾರ್ಯಕರ್ತರಿಗೆ ಧನ್ಯವಾದ ಹೇಳಿ ಕನಕಪುರಕ್ಕೆ ತೆರಳಿದರು.
ಡಿಕೆಶಿ ಸಂಜೆ ತಮ್ಮ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಇರುವ ಪೂರ್ವಿಕರ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಕಳೆದ ಮಹಾಲಯ ಅಮಾವಾಸ್ಯೆ ಸಂದರ್ಭ ಅವರು ದೆಹಲಿಯಲ್ಲಿ ಇ.ಡಿ. ವಿಚಾರಣೆ ಎದುರಿಸುತ್ತಿದ್ದ ಕಾರಣ ಪೂಜೆ ಸಲ್ಲಿಸಲು ಆಗಿರಲಿಲ್ಲ. ಇದೇ ಕಾರಣಕ್ಕೆ ಡಿಕೆಶಿ ಕಣ್ಣೀರು ಹಾಕಿದ್ದರು.