ಬೆಂಗಳೂರು: ತೀವ್ರ ಬರದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಯಾದಗಿರಿ ಪ್ರದೇಶದ ಜನರ ಕುಡಿಯುವ ನೀರಿಗಾಗಿ ತಕ್ಷಣವೇ ಕೊಯ್ನಾ ಹಾಗೂ ಉಜ್ಜನಿ ಅಣೆಕಟ್ಟಿನಿಂದ ಕೃಷ್ಣ ಹಾಗೂ ಭೀಮಾ ನದಿಗಳಿಗೆ ನೀರು ಹರಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ.