‘ಸಿಬಿಐ ಸಹ ಯಾವುದೇ ನೋಟಿಸ್ ಕೊಟ್ಟಿಲ್ಲ. ಆದರೆ ಸಿಬಿಐನವರು ನನ್ನ ಮನೆ ಕಾಯುತ್ತಿದ್ದಾರೆ. ಈ ಅಧಿಕಾರಿಗಳು ಮನೆಗೆ ಬರಲಿ ಎಂದು ಬಾಗಿಲು ತೆರೆದುಕೊಂಡು ಕಾಯುತ್ತಿದ್ದೇನೆ. ಅಕ್ರಮ ಸಂಪತ್ತು ಹೊಂದಿದ್ದ ಆರೋಪ ಪ್ರಕರಣವನ್ನು ಇ.ಡಿ ತನಿಖೆ ನಡೆಸುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬಿಐಗೆ ವಹಿಸಿದ್ದಾರೆ. ಅದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಎಸಿಬಿ, ಲೋಕಾಯುಕ್ತದ ಮೇಲೆ ಅವರಿಗೆ ನಂಬಿಕೆ ಇದ್ದಂತಿಲ್ಲ’ ಎಂದು ಆರೋಪಿಸಿದರು.