ಶಿವಕುಮಾರ್ 2016– 17ನೇ ಸಾಲಿನಲ್ಲಿ ತಮ್ಮ ಆಸ್ತಿಗೆ ಸರಿಯಾದ ತೆರಿಗೆ ಪಾವತಿಸದ ಆರೋಪಕ್ಕೆ ಒಳಗಾಗಿದ್ದಾರೆ. ಐ.ಟಿ ಈ ಕಾರಣಕ್ಕೆ 2017ರ ಆಗಸ್ಟ್ 2ರಂದು ಶಿವಕುಮಾರ್ ಅವರ ಸದಾಶಿವನಗರದ ಮನೆ, ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿರುವ ಫ್ಲ್ಯಾಟ್ ಮತ್ತು ಇದೇ ಎನ್ಕ್ಲೇವ್ನಲ್ಲಿರುವ ಅವರ ಆಪ್ತರ ಮನೆಗಳಲ್ಲದೆ, ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿತ್ತು.