<p><strong>ಬೆಂಗಳೂರು:</strong> ಜಲ ಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಬುಧವಾರ ಆದಾಯ ತೆರಿಗೆ ಇಲಾಖೆ (ಐ.ಟಿ) ಕಚೇರಿಗೆ ಭೇಟಿ ನೀಡಿ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ವಿವರಣೆ ನೀಡಿದ್ದಾರೆ.</p>.<p>ಸಚಿವರು ತಮ್ಮ ವಕೀಲರ ಜೊತೆ ಸುದೀರ್ಘವಾಗಿ ಸಮಾಲೋಚಿಸಿದ ಬಳಿಕ ಐ.ಟಿ ಕಚೇರಿಗೆ ತೆರಳಿ ವಿವರಣೆ ನೀಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಹೊಂದಿದ್ದಾರೆ ಎನ್ನಲಾದ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.</p>.<p>ಸಚಿವರ ತಾಯಿ ಗೌರಮ್ಮ ಅವರಿಗೆ ಈಚೆಗೆ ನೋಟಿಸ್ ನೀಡಿದ್ದ ಐ.ಟಿ. ಕೆಲವು ಆಕ್ಷೇಪಗಳನ್ನು ಎತ್ತಿತ್ತು. ಇವುಗಳಿಗೆ ಬುಧವಾರದ (ಮಾರ್ಚ್ 6) ಒಳಗೆ ಸೂಕ್ತ ವಿವರಣೆ ನೀಡುವಂತೆ ಕೇಳಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಲ ಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಬುಧವಾರ ಆದಾಯ ತೆರಿಗೆ ಇಲಾಖೆ (ಐ.ಟಿ) ಕಚೇರಿಗೆ ಭೇಟಿ ನೀಡಿ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ವಿವರಣೆ ನೀಡಿದ್ದಾರೆ.</p>.<p>ಸಚಿವರು ತಮ್ಮ ವಕೀಲರ ಜೊತೆ ಸುದೀರ್ಘವಾಗಿ ಸಮಾಲೋಚಿಸಿದ ಬಳಿಕ ಐ.ಟಿ ಕಚೇರಿಗೆ ತೆರಳಿ ವಿವರಣೆ ನೀಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಹೊಂದಿದ್ದಾರೆ ಎನ್ನಲಾದ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.</p>.<p>ಸಚಿವರ ತಾಯಿ ಗೌರಮ್ಮ ಅವರಿಗೆ ಈಚೆಗೆ ನೋಟಿಸ್ ನೀಡಿದ್ದ ಐ.ಟಿ. ಕೆಲವು ಆಕ್ಷೇಪಗಳನ್ನು ಎತ್ತಿತ್ತು. ಇವುಗಳಿಗೆ ಬುಧವಾರದ (ಮಾರ್ಚ್ 6) ಒಳಗೆ ಸೂಕ್ತ ವಿವರಣೆ ನೀಡುವಂತೆ ಕೇಳಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>