ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಶೇಷ ನ್ಯಾಯಾಲಯ ಬುಧವಾರ ಹೊರಡಿಸಿರುವ ಆದೇಶದ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆ ಆಗಿರುವ ಕುರಿತ ತನಿಖೆ ಆರಂಭದ ಹಂತದಲ್ಲಿ ಇರುವುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ನೀಡಿದ್ದ ಆದೇಶದಲ್ಲಿ ತಿಳಿಸಿದ್ದರು.