ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ನ್ಯಾಯ ವಿರೋಧಿ ಕ್ರಮ: ಡಿ.ಕೆ.ಶಿವಕುಮಾರ್

ಡಿಕೆಶಿ ಬಳಿ ಹಿಂದುಳಿದ ವರ್ಗಗಳ ನಾಯಕರ ದೂರು
Last Updated 13 ಜೂನ್ 2020, 20:50 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಪರವಾಗಿಲ್ಲ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ
ವಾದ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ’ ಎಂದು ಈ ಸಮುದಾಯಗಳಮುಖಂಡರು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ‌ ಬಳಿ ದೂರಿದರು.

ಮಹಾಲಕ್ಷ್ಮಿಪುರದಲ್ಲಿ ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಅವರ ನಿವಾಸದಲ್ಲಿ ಶನಿವಾರ ನಡೆದ ಹಿಂದುಳಿದ ಸಮುದಾಯದ ನಾಯಕರ ಉಪಾಹಾರ ಕೂಟದಲ್ಲಿ ಶಿವಕುಮಾರ್‌ ಭಾಗವಹಿಸಿದರು.

ಈ ವೇಳೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ನಾಯಕರು, ‘ಬಜೆಟ್‍ನಲ್ಲಿ ಸರ್ಕಾರ ಕಾಟಾಚಾರಕ್ಕೆ ಅನುದಾನ ನೀಡಿದೆ. ಯೋಜನಾ ವೆಚ್ಚಗಳನ್ನು ಬಿಟ್ಟು ಯೋಜನೇತರ ವೆಚ್ಚಗಳಿಗೆ ಹಣ ನೀಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT