ಕೇಂದ್ರ ಸರ್ಕಾರದ ಜತೆಗಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ನೀಡಬೇಕಿದ್ದ ಕಲ್ಲಿದ್ದಲು ಪೂರೈಕೆ ಆಗದಿರುವುದರಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಕೇಂದ್ರದ ವಿದ್ಯುತ್ ಗ್ರಿಡ್ನಿಂದ ಕೂಡಾ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಸೌರ ಮತ್ತು ಜಲ ವಿದ್ಯುತ್ ಬಳಸಿ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಸರಬರಾಜು ಮಾಡುವಂತೆ ಸೂಚಿಸಿದ್ದಾರೆ.