ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ, ಪ್ರಧಾನಿ ಮೋದಿ ಅವರೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಕೂಡ ಈ ವಿಷಯ ಚರ್ಚೆ ಆಗಿದೆ. ಈಗಾಗಲೇ ಬಹಳಷ್ಟು ವಲಸೆ ಕಾರ್ಮಿಕರು ಇದ್ದ ಸ್ಥಳದಲ್ಲೇ 28 ದಿನ ಮುಗಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಗತ್ಯ ಎಚ್ಚರಿಕೆಯೊಂದಿಗೆ ತಪಾಸಣೆ ಮಾಡಿಸಿ, ತವರಿಗೆ ಕರೆತರಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದೇವೆ. ಊರು ಮುಟ್ಟಿದ ಮೇಲೂ ಕಾರ್ಮಿಕರು ಮತ್ತೆ ಗೃಹಬಂಧನದಲ್ಲೇ ಇರಬೇಕಾಗುತ್ತದೆ. ಈ ಬಗ್ಗೆ ಗುರುವಾರ (ಏ.30) ಸಂಜೆಯೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.