ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿರುವ ಬೆನ್ನಲ್ಲೇ ಮಿಂಟೊ ಆಸ್ಪತ್ರೆಯ ಕಿರಿಯ ವೈದರು ತಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ.
ಕಿರಿಯ ವೈದ್ಯ ಸಂಘದ ಅಧ್ಯಕ್ಷ ಎಲ್.ಎನ್ ರೆಡ್ಡಿ ಅವರು ಈ ಹೇಳಿಕೆ ನೀಡಿದ್ದಾರೆ.'ಇವತ್ತಿಗೆ ಈ ಕ್ಷಣದಲ್ಲಿ ಹಿಂಪಡೆದಿದ್ದೇವೆ. ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆಯನ್ನು ಕೊಡುತ್ತೇವೆ ಎಂದು ಸರ್ಕಾರದಿಂದಲೂ ಭರವಸೆ ಬಂದಿದೆ' ಎಂದಿದ್ದಾರೆ.'ಈ ಹಿನ್ನಲೆ ನಾವು ಮುಷ್ಕರ ವಾಪಸ್ಸು ಪಡೆಯುತ್ತಿದ್ದೇವೆ' ಎಂದು ತಿಳಿಸಿದ್ದಾರೆ.