ಇದಕ್ಕಾಗಿ ರಾಜ್ಯ ಸರ್ಕಾರದ ಭೂಮಿ ಉಸ್ತುವಾರಿ ಕೋಶ ವತಿಯಿಂದ ’ಬೆಳೆಸಾಲ ಮನ್ನಾ ವ್ಯವಸ್ಥೆ’ ವೆಬ್ ಸೈಟ್ ಸಿದ್ಧಗೊಳಿಸಲಾಗಿದೆ. ಇದರಲ್ಲಿ ರೈತರು ಸಾಲ ಪಡೆದಿರುವ ಬ್ಯಾಂಕ್ ಖಾತೆ ಸಂಖ್ಯೆಯಿಂದ ಪ್ರಾರಂಭವಾಗಿ ಆಧಾರ್, ಪಡಿತರ ಚೀಟಿ, ಪಹಣಿ ಸಂಖ್ಯೆ ಎಲ್ಲಾ ಮಾಹಿತಿ ಸೇರಿಸಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿಯಲ್ಲಿ ಹೆಸರಿರುವ ಯಾರಾದರೂ ಒಬ್ಬರು ಸರ್ಕಾರಿ ನೌಕರರಾಗಿದ್ದರೆ ಅಥವಾ ಸರ್ಕಾರಿ ನೌಕರರಾಗಿದ್ದು ನಿವೃತ್ತಿ ವೇತನ ಪಡೆಯುತ್ತಿದ್ದರೆ, ಆದಾಯ ತೆರಿಗೆ ಇಲಾಖೆ ಪಾವತಿದಾರರಾಗಿದ್ದರೆ ಅಂತಹವರು ಸಾಲ ಮನ್ನಾ ವ್ಯಾಪ್ತಿಗೆ ಬರುವುದಿಲ್ಲ.