ಬೆಂಗಳೂರು: ‘ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಶಾಸಕ ಶಿವಕುಮಾರ್ ವಿಚಾರಣೆ ನಡೆಯಲಿದ್ದು, ಈ ಸಮಯದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ದೆಹಲಿಗೆ ಬರುವುದು ಬೇಡ’ ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದ್ದಾರೆ.
‘ವಿಚಾರಣೆ ಸಮಯದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣ ಹಾಗೂ ಇತರೆಡೆ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ, ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗಲಿದೆ. ಹಾಗಾಗಿ ದೆಹಲಿಗೆ ಬರಬೇಡಿ’ ಎಂದು ಮನವಿ ಮಾಡಿದ್ದಾರೆ.