<p>ಬೆಳಗಾವಿ: ‘ಕೋವಿಡ್–19 ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅವರನ್ನು ಟೀಕಿಸಿ, ರಾಜಕೀಯಗೊಳಿಸಬಾರದು’ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೋರಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೆರೆಯ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ದೇವೇಂದ್ರ ಫಡ್ನವೀಸ್ ಅವರು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಶಂಸಿರುವಂತೆ ಸಿದ್ದರಾಮಯ್ಯ ಅವರೂ ಸರ್ಕಾರವನ್ನು ಬೆಂಬಲಿಸಲಿ’ ಎಂದು ಮನವಿ ಮಾಡಿದರು.</p>.<p>‘ಕೋವಿಡ್–19 ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮಗಳನ್ನು ವಿವಿಧ ರಾಷ್ಟ್ರಗಳು ಮೆಚ್ಚಿವೆ. ಆದರೆ ಸ್ಥಳೀಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸು ತ್ತಿರುವುದು ದುರ್ದೈವ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ದೇಶದ 80 ಕೋಟಿ ಜನರಿಗೆ ಅಕ್ಕಿ, ಬೇಳೆ ನೀಡುವ ನಿರ್ಧಾರವನ್ನು ಮೋದಿಯವರು ಕೈಗೊಂಡಿದ್ದಾರೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಕೋವಿಡ್–19 ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅವರನ್ನು ಟೀಕಿಸಿ, ರಾಜಕೀಯಗೊಳಿಸಬಾರದು’ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೋರಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೆರೆಯ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ದೇವೇಂದ್ರ ಫಡ್ನವೀಸ್ ಅವರು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಶಂಸಿರುವಂತೆ ಸಿದ್ದರಾಮಯ್ಯ ಅವರೂ ಸರ್ಕಾರವನ್ನು ಬೆಂಬಲಿಸಲಿ’ ಎಂದು ಮನವಿ ಮಾಡಿದರು.</p>.<p>‘ಕೋವಿಡ್–19 ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮಗಳನ್ನು ವಿವಿಧ ರಾಷ್ಟ್ರಗಳು ಮೆಚ್ಚಿವೆ. ಆದರೆ ಸ್ಥಳೀಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸು ತ್ತಿರುವುದು ದುರ್ದೈವ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ದೇಶದ 80 ಕೋಟಿ ಜನರಿಗೆ ಅಕ್ಕಿ, ಬೇಳೆ ನೀಡುವ ನಿರ್ಧಾರವನ್ನು ಮೋದಿಯವರು ಕೈಗೊಂಡಿದ್ದಾರೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>