‘ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ನೇಮಕ ತೀರ್ಮಾನ ಸಂವಿಧಾನದ ಆಶಯಕ್ಕೆ ವಿರುದ್ಧ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ ಕಾಯ್ದೆಯ ಉಲ್ಲಂಘನೆಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಮುಗಿಯುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ನೆಪ ಹೇಳಿ ಚುನಾವಣೆ ಮುಂದೂಡಲು ಆಯೋಗದ ಮೇಲೆ ಸರ್ಕಾರ ಒತ್ತಡ ಹೇರಲಾಗುತ್ತಿದೆ. ಆಡಳಿತ ಸಮಿತಿ ನೇಮಿಸುವ ಉದ್ದೇಶ ಸರ್ಕಾರಕ್ಕೆ ಏಕೆ. ಈ ಉದ್ದೇಶದ ಈಡೇರಿಕೆಗೆ ಗ್ರಾಮ ಸ್ವರಾಜ್ ಕಾಯ್ದೆಯ ಅಂಶಗಳನ್ನು ತಿರುಚಲು ಸರ್ಕಾರ ಕೈಹಾಕಿದ್ದು ಯಾಕೆ’ ಎಂದು ಅವರು ಪ್ರಶ್ನಿಸಿದ್ದಾರೆ.