ಜಾನಪದ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ 65ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕದ ಗಮನ ಸೆಳೆದಿದ್ದ ಅವರು ಕಥೆ, ಕವಿತೆ, ಕಾದಂಬರಿ, ವಿಮರ್ಶೆ, ನಾಟಕ, ಕಾವ್ಯ ಮೀಮಾಂಸೆ, ಪ್ರಬಂಧ ಸಾಹಿತ್ಯ ಪ್ರಕಾರದಲ್ಲೂ ಛಾಪು ಮೂಡಿಸಿದ್ದರು. ಕನ್ನಡವಷ್ಟೇ ಅಲ್ಲದೇ ಇಂಗ್ಲಿಷ್, ಹಿಂದಿ, ಸಂಸ್ಕೃತ, ಪ್ರಾಕೃತ ಭಾಷೆಗಳನ್ನು ಬಲ್ಲ ಅವರು, ಕನ್ನಡ ಪ್ರಾದ್ಯಾಪಕರಾಗಿ ಮಂಡ್ಯದ ಕೆ.ಎಂ.ದೊಡ್ಡಿ, ಮಡಿಕೇರಿ, ತುಮಕೂರು, ಮಂಡ್ಯ, ಮತ್ತಿತರ ಸರ್ಕಾರಿ ಕಾಲೇಜುಗಳಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.