ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಅಂಕಿ ಅಂಶಗಳ ಸಹಿತ ಎಳೆ ಎಳೆಯಾಗಿ ಬಿಡಿಸಿಟ್ಟ ಅವರು, ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಿಸಿ
ಮುಟ್ಟಿಸಿದರು. ‘100 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರವೇ ಪ್ರಕಟಿಸಿದೆ. ಮತ್ತೆ 20 ತಾಲ್ಲೂಕುಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಆದರೆ, ರಾಜ್ಯ ಸರ್ಕಾರ ಇದರ ಬಗ್ಗೆ ಗಮನವೇ ಹರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ
ಜತೆ ಸಭೆ ನಡೆಸಿಲ್ಲ. ಬರ ಪರಿಸ್ಥಿತಿ ನಿರ್ವಹಣೆಗೆ ಪ್ರತಿ ಕ್ಷೇತ್ರಕ್ಕೆ ₹50 ಲಕ್ಷ ನೀಡಲಾಗಿದೆ ಎಂದು ಕಂದಾಯ ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಅದರಲ್ಲಿ ₹10 ಲಕ್ಷವೂ ಖರ್ಚಾಗಿಲ್ಲ. ಅದನ್ನು ಹಳೆ ಬಿಲ್ಗಳ ಪಾವತಿಗೆ ಬಳಸಲಾಗಿದೆ’ ಎಂದು ದೂರಿದರು.