ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕ ಅಕಾಡೆಮಿ ಪ್ರಶಸ್ತಿ ವಾಪಸ್: ರಂಗಕರ್ಮಿ ಬನ್ನಾಡಿ

Last Updated 20 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)
ಪ್ರಕ್ರಿಯೆಯನ್ನು ಖಂಡಿಸಿ, ರಂಗಕರ್ಮಿ ವಸಂತ ಬನ್ನಾಡಿ ಅವರು ನಾಟಕ ಅಕಾಡೆಮಿಪ್ರಶಸ್ತಿಯನ್ನು ವಾಪಸ್ ಮಾಡುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

ಬನ್ನಾಡಿ ಅವರಿಗೆ ಅಕಾಡೆಮಿಯು 2002ರಲ್ಲಿ ಪ್ರಶಸ್ತಿ ನೀಡಿತ್ತು. 17 ವರ್ಷಗಳ ಬಳಿಕ ಪ್ರಶಸ್ತಿ ಹಿಂದಿರುಗಿಸಲು ಮುಂದಾಗಿದ್ದಾರೆ.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ. ಅಲ್ಲದೆ ನಗದು ಬಹುಮಾನವನ್ನೂ ಡಿ.ಡಿ ಮೂಲಕ ಹಿಂದಿರುಗಿಸುತ್ತೇನೆ’ ಎಂದು ಬನ್ನಾಡಿ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT