ಪ್ರವಾಹ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾಗಿರುವ 25,983 ರೈತರಿಗೆ ಒಟ್ಟು ₹22.24 ಕೋಟಿ ಇನ್ಪುಟ್ ಸಬ್ಸಿಡಿ ನೀಡಲಾಗಿದೆ ಎಂದು ದೇಶಪಾಂಡೆ ತಿಳಿಸಿದರು. ಗರಿಷ್ಠ ಒಂದು ತಿಂಗಳಲ್ಲಿ ಅರ್ಹರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮೊತ್ತ ಹಾಕಲಾಗುವುದು. ಇದಲ್ಲದೆ, ಮೂಲಸೌಲಭ್ಯಗಳಿಗೆ ಆಗಿರುವ ಹಾನಿಗೆ ₹214 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.