ಕೇಂದ್ರದ ಗೃಹ ಸಚಿವ ರಾಜನಾಥ ಸಿಂಗ್ ನೇತೃತ್ವದ ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ (ಎನ್ಡಿಆರ್ಎಫ್)ಯ ಉನ್ನತ ಮಟ್ಟದ ಸಮಿತಿ ಕಳೆದ ಫೆಬ್ರುವರಿ 20ರಂದು ಸಭೆ ನಡೆಸಿ ರಾಜ್ಯಕ್ಕೆ ₹ 949.49 ಕೋಟಿ ಪರಿಹಾರ ನೀಡಲು ನಿರ್ಧರಿಸಿತ್ತು. ಆರ್ಬಿಐ ಸೂಚನೆಯ ಮೇರೆಗೆಪರಿಹಾರದ ಮೊದಲ ಕಂತಿನ ರೂಪದಲ್ಲಿ ಈ ಮೊತ್ತವನ್ನು ಕರ್ನಾಟಕ ಸರ್ಕಾರದ ಖಾತೆಗೆ ಜಮಾ ಮಾಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಬಾಕಿ ಮೊತ್ತವನ್ನು ಎರಡನೇ ಕಂತಿನರೂಪದಲ್ಲಿ ನೀಡುವುದಾಗಿ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.