ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಕಲುಷಿತ ನೀರು ಸೇವಿಸಿ 35 ವರ್ಷದ ಗಂಡಾನೆ ಮೃತಪಟ್ಟಿದೆ.
ಹನೂರು ಬಫರ್ ವಲಯದ ಬಾವಿಹಳ್ಳ ಅರಣ್ಯ ಪ್ರದೇಶದಲ್ಲಿ ಕೆಸರುಮಿಶ್ರಿತ ಕಲುಷಿತ ನೀರು ಕುಡಿದು ಸಾವನ್ನಪ್ಪಿದೆ. ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುತ್ತೇಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಮಾಪುರ ಪಶು ವೈದ್ಯಾಧಿಕಾರಿ ಸಿದ್ದರಾಜು ಮರಣೋತ್ತರ ಪರೀಕ್ಷೆ ನಡೆಸಿದ್ದು, ಕಲುಷಿತ ನೀರೇ ಆನೆ ಸಾವಿಗೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.