‘ಲೋಕಸಭಾ ಚುನಾವಣೆ ಘೋಷಣೆಯಾಗುವ ಮುನ್ನವೇ ಮುಂಗಾರು–ಹಿಂಗಾರಿನಲ್ಲಿ ಬರಪೀಡಿತ ತಾಲ್ಲೂಕಿಗೆ ₹50 ಲಕ್ಷ, ಹಿಂಗಾರಿನ ಬರಪೀಡಿತ ತಾಲ್ಲೂಕಿಗೆ ₹25 ಲಕ್ಷ ಹಾಗೂ ಉಳಿದ ತಾಲ್ಲೂಕಿಗೆ ₹10 ಲಕ್ಷ ಅನುದಾನ ಬಿಡುಗಡೆ ಮಾಡಿದ್ದೆವು. ಎಷ್ಟು ಹಣ ವೆಚ್ಚವಾಗಿದೆ ಎಂಬುದನ್ನು ಪರಿಶೀಲನೆ ನಡೆಸಬೇಕಿತ್ತು. ಅದಕ್ಕಾಗಿ ಸಭೆ ಕರೆದಿದ್ದೆವು. ಇದು ನೀತಿ ಸಂಹಿತೆಯ ಉಲ್ಲಂಘನೆ ಹೇಗಾಗುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.