‘ರಾಜ್ಯದ ಹಲವೆಡೆ ನೀರಿನ ಅಭಾವ ತೀವ್ರವಾಗಿದೆ. ಆದರೆ ಶಾಲಾ, ಕಾಲೇಜುಗಳು ಆರಂಭ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸಬೇಕಾಗಿದೆ. ಹೀಗಾಗಿ ಟ್ಯಾಂಕರ್ ಬಳಸಿಯಾದರೂ ನೀರು ಪೂರೈಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ವಿನಂತಿ ಮಾಡಿದ್ದೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದರು.