ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ‘ವಿಜ್ಞಾನ ಸಂಸ್ಥೆಗಳು, ವಿಮಾನ ನಿಲ್ದಾಣಗಳು ಸೇರಿ ದೇಶದ ಬಹುತೇಕ ಕಡೆ ಕಟ್ಟೆಚ್ಚರ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಆರ್ಡಿಒ, ಭಾರತೀಯ ವಿಜ್ಞಾನ ಸಂಸ್ಥೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ, ಈ ಸಂಸ್ಥೆಗಳಲ್ಲಿ ಯಾವುದಾದರೂ ಅನಾಹುತ ಸಂಭವಿಸಿದರೆ ತುರ್ತು ಸಂದರ್ಭ ಜಿಲ್ಲಾ ಕೇಂದ್ರದಿಂದ ಪೊಲೀಸ್ ತಂಡ ಎಷ್ಟು ಬೇಗ ಆ ಸ್ಥಳ ತಲುಪಬಹುದೆಂದು ಇಡೀ ತಂಡದೊಂದಿಗೆ ಸಣ್ಣ ಪರೀಕ್ಷೆ ನಡೆಸಲಾಗಿದೆ’ ಎಂದರು.