ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪಟ್ಟಿಗೆ ಇನ್ನಷ್ಟು ತಾಲ್ಲೂಕು: ಹೆಚ್ಚುವರಿಯಾಗಿ ತಲಾ ₹ 50 ಲಕ್ಷ ಬಿಡುಗಡೆ

Last Updated 19 ಡಿಸೆಂಬರ್ 2018, 19:35 IST
ಅಕ್ಷರ ಗಾತ್ರ

ಬೆಳಗಾವಿ: ಹಿಂಗಾರು ಮಳೆ ಕೊರತೆ ಆಧರಿಸಿ, ಡಿಸೆಂಬರ್‌ ಅಂತ್ಯದೊಳಗೆ ಇನ್ನಷ್ಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಬುಧವಾರ ಉತ್ತರ ನೀಡಿದ ಅವರು, ‘ಬರ ಪರಿಹಾರಕ್ಕೆ ಹಣದ ಕೊರತೆ ಇಲ್ಲ. ಉದ್ಯೋಗ ಅರಸಿ ಗುಳೆ ಹೋಗಲು ಬಿಡುವುದಿಲ್ಲ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಾನು
ವಾರುಗಳಿಗೆ ಅಗತ್ಯವಿರುವ ಗೋ ಶಾಲೆ ಮತ್ತು ಮೇವು ಬ್ಯಾಂಕುಗಳನ್ನು ತೆರೆಯಲಾಗುವುದು’ ’ ಎಂದು ಭರವಸೆ ನೀಡಿದರು.

ಸತತ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು, ಪರಿಸ್ಥಿತಿ ಎದುರಿಸುವ ಜೊತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ದೇಶಪಾಂಡೆ ಹೇಳಿದರು.

ಬರ ಪೀಡಿತ ತಾಲ್ಲೂಕುಗಳಿಗೆ ಈವರೆಗೆ ₹ 50 ಲಕ್ಷ ನೀಡಲಾಗಿದೆ. ಹೆಚ್ಚುವರಿ ಹಣ ಬಿಡುಗಡೆಗೂ ಆದೇಶ ಹೊರಡಿಸಲಾಗಿದೆ. ಮೇವಿಗೆ ಒಟ್ಟು ₹ 10 ಕೋಟಿ ಒದಗಿಸಲಾಗಿದೆ.ನೆರೆ ರಾಜ್ಯಗಳಿಗೆ ಮೇವು ಸಾಗಣೆ ನಿಷೇಧಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT