ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್ಎಂ.ವಿ ಎರಡನೇ ಹಂತದ ಗಾಂಧಿ ವಿದ್ಯಾಲಯ ಕನ್ನಡ ಮತ್ತು ತಮಿಳು ಪ್ರಾಥಮಿಕ ಶಾಲೆಯ ಎರಡನೇ ಮತಗಟ್ಟೆಯಲ್ಲಿ (158/2) ನಿರ್ದಿಷ್ಟ ಅಭ್ಯರ್ಥಿಯ ಗುರುತಿನ ಮುಂದಿರುವ ಚಿಹ್ನೆಗೆ ಮತ ಒತ್ತಿದರೆ, ಅದು ಬೇರೆಯವರಿಗೆ ಚಲಾವಣೆಯಾಗುತ್ತಿತ್ತು.
ವಿವಿಪ್ಯಾಟ್ನಲ್ಲೂ ಬೇರೆ ಅಭ್ಯರ್ಥಿಯ ಚಿಹ್ನೆ ಕಾಣಿಸಿಕೊಳ್ಳುತ್ತಿತ್ತು. ಬಳಿಕ ಇಲ್ಲಿ ಮತದಾನ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ರದ್ದುಪಡಿಸಲಾಯಿತು.