ಅಮಿತಾಬ್ ನೇತೃತ್ವದ ಮೊದಲನೇ ತಂಡವು ಇದೇ 17 ರಂದು ಯಾದಗಿರಿ, ರಾಯಚೂರು, 18 ರಂದು ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಡಾ.ಮಹೇಶ್ ನೇತೃತ್ವದ ಎರಡನೇ ತಂಡವು ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಮಾನಸ್ ಚೌಧರಿ ನೇತೃತ್ವದ ಮೂರನೇ ತಂಡವು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ತೆರಳಲಿದೆ ಎಂದು ದೇಶಪಾಂಡೆ ಹೇಳಿದರು.