ಬರ ನಿರ್ವಹಣೆ ಕುರಿತಾದಸಂಪುಟ ಉಪ ಸಮಿತಿಯ ಅಧ್ಯಕ್ಷತೆ ವಹಿಸಿ ಬಾಗಲಕೋಟೆಯಲ್ಲಿ ಮಂಗಳವಾರ ಪರಿಶೀಲನಾ ಸಭೆ ನಡೆಸಿದ ಅವರು, ‘ಜಲಾಶಯಗಳಲ್ಲಿ ಸಂಗ್ರಹದ ಕೊರತೆಯಿಂದ ಬೇಸಿಗೆಯಲ್ಲಿ ನಾಲೆಗಳಿಗೆ ನೀರು ಹರಿಸದಿದ್ದಲ್ಲಿ, ಅಂತರ್ಜಲದ ಕೊರತೆಯಿಂದ ಕೊಳವೆ ಬಾವಿ ಬತ್ತಿ ಹೋಗಿರುವ ಹೊಲಗಳ ರೈತರಿಗೂ ಬೆಳೆ ನಷ್ಟದ ಪರಿಹಾರ ಸಿಗುವಂತಾಗಲಿ ಎಂಬುದು ಸರ್ಕಾರದ ಉದ್ದೇಶ’ ಎಂದು ಹೇಳಿದರು.