‘ಹಿರಿಯ ಸಹೋದರ ರಾಮಚಂದ್ರ ಜಾಧವ ಅವರ ಆರೋಗ್ಯ ಸರಿ ಇಲ್ಲ. ಹಾಗಾಗಿ, ಅವರು ಸ್ಪರ್ಧಿಸುತ್ತಿಲ್ಲ. ಕ್ಷೇತ್ರದ ಜನರ ಅನಿಸಿಕೆ ಕೂಡ ಡಾ.ಅವಿನಾಶ ಅವರನ್ನೇ ಕಣಕ್ಕಿಳಿಸಬೇಕು ಎಂಬುದಾಗಿದೆ. ಹಾಗಾಗಿ, ಟಿಕೆಟ್ ವಿಚಾರದಲ್ಲಿ ನಮ್ಮ ಕುಟುಂಬ ಒಮ್ಮತದ ನಿರ್ಧಾರ ಕೈಗೊಂಡಿದೆ’ ಎಂದು ಅವರು ಶನಿವಾರ ಮಾಧ್ಯಮದವರಿಗೆ ತಿಳಿಸಿದರು.