‘ವಿಡಿಯೊ ಬಹಿರಂಗವಾಗಿರುವುದು ಪಕ್ಷಕ್ಕೆ ಮುಜುಗರ ತಂದಿಲ್ಲ. ಮುಖ್ಯಮಂತ್ರಿಯಾಗಿ ಅವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಯಾರು ರಾಜೀನಾಮೆ ನೀಡಿದ್ದಾರೋ ಅಂತಹ ಶಾಸಕರ ನೆರವಿನಿಂದ ನಮಗೆ ಅಧಿಕಾರ ಸಿಕ್ಕಿದೆ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದ ಅವರು, ‘ಶಾಸಕರು ರಾಜೀನಾಮೆ ನೀಡಿರುವುದು ನಮ್ಮ ಪಕ್ಷದ ಹೈಕಮಾಂಡ್ನ ಸೂಚನೆಯಂತೆ ಎಂದು ಯಡಿಯೂರಪ್ಪ ಹೇಳಿರುವುದು ನನಗೆ ತಿಳಿದಿಲ್ಲ. ನಾನು ಇನ್ನೂ ಆ ವಿಡಿಯೊ ನೋಡಿಲ್ಲ. ಪತ್ರಿಕೆಗಳಲ್ಲಿ ಮಾತ್ರ ಓದಿದ್ದೇನೆ’ ಎಂದರು.