ಮಡಿಕೇರಿ: ‘ದೇಶ ವಿರೋಧಿ ಘೋಷಣೆ ಕೂಗುವ ಪ್ರಕರಣಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ದೇಶ ವಿರೋಧಿ ಘೋಷಣೆ ಕೂಗುವ ವ್ಯಕ್ತಿಗಳು ಹಾಗೂ ಅದಕ್ಕೆ ಪರೋಕ್ಷವಾಗಿ ಬೆಂಬಲ ನೀಡುವ ಸಂಘಟನೆಗಳನ್ನು ಮಟ್ಟ ಹಾಕುತ್ತೇವೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಲ್ಲಿ ಭಾನುವಾರ ಎಚ್ಚರಿಸಿದರು.
‘ಪ್ರತಿಭಟನೆಗಳನ್ನು ಕೆಲವರು ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಘಟನೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತನಿಖೆ ನಡೆಸಲಿವೆ’ ಎಂದು ಸಂಗಯ್ಯನಪುರದಲ್ಲಿ ಅವರು ತಿಳಿಸಿದರು.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್ ಭೇಟಿ ಹಿನ್ನೆಲೆಯಲ್ಲಿ ಕೊಳೆಗೇರಿ ಕಾಣದಂತೆ ಗೋಡೆ ಕಟ್ಟಿ ವಾಸ್ತವ ಮರೆ ಮಾಚಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ರಾಷ್ಟ್ರದ ಘನತೆಯನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಿದೆ. ಸಣ್ಣಪುಟ್ಟ ಕೆಲಸಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಾರೆ; ಇದು ಸರಿಯಲ್ಲ’ ಎಂದು ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.