<p><strong>ಬೆಂಗಳೂರು: ‘</strong>ಸಿನಿಮಾ ಹಂಚಿಕೆದಾರ ಜಯಣ್ಣ, ಅವರ ಸ್ನೇಹಿತ ರಮೇಶ್ ಹಾಗೂ ಇತರರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ಆರೋಪಿಸಿ ಹಿರಿಯ ನಟ ದ್ವಾರಕೀಶ್ ಎಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ದ್ವಾರಕೀಶ್ ಚಿತ್ರದಿಂದ ನಿರ್ಮಿಸಲಾಗಿದ್ದ 'ಆಯುಷ್ಮಾನ್ ಭವ' ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಅಷ್ಟೇನು ಯಶಸ್ಸು ಕಂಡಿರಲಿಲ್ಲ. ಸಿನಿಮಾ ಹಂಚಿಕೆ ವಿಚಾರವಾಗಿ ಜಯಣ್ಣ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಂತೆ ಹಣ ಕೊಟ್ಟಿರಲಿಲ್ಲ. ಅದನ್ನು ಕೇಳಲು ಜಯಣ್ಣ ಸ್ನೇಹಿತರ ಜೊತೆ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಗಲಾಟೆ ಸಂಬಂಧ ದ್ವಾರಕೀಶ್ ನೀಡಿರುವ ದೂರು ಪರಿಶೀಲಿಸುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದ್ವಾರಕೀಶ್ ಪುತ್ರ ಯೋಗೀಶ್, ‘ನಾನು ಇಲ್ಲದ ವೇಳೆ ಮನೆಗೆ ಬಂದು ತಂದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ.ಯಾವುದೇ ವ್ಯವಹಾರವಾದರೂ ಮನೆಯಿಂದ ಹೊರಗಡೆ ಇರಬೇಕು. ಮನೆಗೆ ಬಂದು ಬೆದರಿಕೆ ಹಾಕುವ ಅವಶ್ಯಕತೆ ಇರಲಿಲ್ಲ’ ಎಂದಿದ್ದಾರೆ.</p>.<p>ಪ್ರತಿಕ್ರಿಯೆ ಪಡೆಯಲು ಜಯಣ್ಣ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸಿನಿಮಾ ಹಂಚಿಕೆದಾರ ಜಯಣ್ಣ, ಅವರ ಸ್ನೇಹಿತ ರಮೇಶ್ ಹಾಗೂ ಇತರರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ಆರೋಪಿಸಿ ಹಿರಿಯ ನಟ ದ್ವಾರಕೀಶ್ ಎಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ದ್ವಾರಕೀಶ್ ಚಿತ್ರದಿಂದ ನಿರ್ಮಿಸಲಾಗಿದ್ದ 'ಆಯುಷ್ಮಾನ್ ಭವ' ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಅಷ್ಟೇನು ಯಶಸ್ಸು ಕಂಡಿರಲಿಲ್ಲ. ಸಿನಿಮಾ ಹಂಚಿಕೆ ವಿಚಾರವಾಗಿ ಜಯಣ್ಣ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಂತೆ ಹಣ ಕೊಟ್ಟಿರಲಿಲ್ಲ. ಅದನ್ನು ಕೇಳಲು ಜಯಣ್ಣ ಸ್ನೇಹಿತರ ಜೊತೆ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಗಲಾಟೆ ಸಂಬಂಧ ದ್ವಾರಕೀಶ್ ನೀಡಿರುವ ದೂರು ಪರಿಶೀಲಿಸುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದ್ವಾರಕೀಶ್ ಪುತ್ರ ಯೋಗೀಶ್, ‘ನಾನು ಇಲ್ಲದ ವೇಳೆ ಮನೆಗೆ ಬಂದು ತಂದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ.ಯಾವುದೇ ವ್ಯವಹಾರವಾದರೂ ಮನೆಯಿಂದ ಹೊರಗಡೆ ಇರಬೇಕು. ಮನೆಗೆ ಬಂದು ಬೆದರಿಕೆ ಹಾಕುವ ಅವಶ್ಯಕತೆ ಇರಲಿಲ್ಲ’ ಎಂದಿದ್ದಾರೆ.</p>.<p>ಪ್ರತಿಕ್ರಿಯೆ ಪಡೆಯಲು ಜಯಣ್ಣ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>