<p><strong>ಬೆಂಗಳೂರು:</strong>ಕೊಡಗಿನ ಕೆ.ಎಚ್.ಮುಸ್ತಫಾ ಅವರ ಅಪ್ರಕಟಿತ ಕಥಾ ಸಂಕಲನ ‘ಹರಾಂನ ಕಥೆಗಳು’ 2019ರ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಆಯ್ಕೆಯಾಗಿದೆ.</p>.<p>ಈ ಪ್ರಶಸ್ತಿಯು ₹ 10 ಸಾವಿರ ಹಾಗೂ ಫಲಕವನ್ನು ಒಳಗೊಂಡಿದೆ.ಈ ಹೊತ್ತಿಗೆ ಕಥಾ ಸ್ಪರ್ಧೆಯ ಫಲಿತಾಂಶವೂ ಪ್ರಕಟವಾಗಿದೆ. ತುಮಕೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಎಂ. ಕಲ್ಲೂರು ಅವರ ‘ಒಂಟಿ ನಕ್ಷತ್ರ ಗುಳೆ ಹೋದ ದಿವಸ’ ಕಥೆಯು ಪ್ರಥಮ ಬಹುಮಾನ ಪಡೆದಿದ್ದು, ₹ 5 ಸಾವಿರ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿದ್ಯಾರ್ಥಿ ಕಪಿಲ ಪಿ. ಹುಮನಾಬಾದೆ ಅವರ ‘ಬಿಸಿಲು’ ಕಥೆಗೆ ದ್ವಿತೀಯ ಬಹುಮಾನ (₹ 3 ಸಾವಿರ ನಗದು),ಬೆಂಗಳೂರಿನ ಶಿಕ್ಷಕ ದಾದಾಪೀರ್ ಜೈಮನ್ ಅವರ ‘ಎಲ್ಲೋ ಯಲ್ಲೋ...’ ಕಥೆ ತೃತೀಯ ಬಹುಮಾನ (₹ 2 ಸಾವಿರ ನಗದು) ಪಡೆದಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಬಸನಗೌಡ ಪಾಟೀಲ ಅವರ ‘ಮೈಲಿಗೆ ಗುಡಿಸಲು’ ಮತ್ತು ಪುತ್ತೂರಿನ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ವಿಶ್ವನಾಥ ಅವರ ‘ಋಣ’ ಮೆಚ್ಚುಗೆ ಪಡೆದ ಕಥೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೊಡಗಿನ ಕೆ.ಎಚ್.ಮುಸ್ತಫಾ ಅವರ ಅಪ್ರಕಟಿತ ಕಥಾ ಸಂಕಲನ ‘ಹರಾಂನ ಕಥೆಗಳು’ 2019ರ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಆಯ್ಕೆಯಾಗಿದೆ.</p>.<p>ಈ ಪ್ರಶಸ್ತಿಯು ₹ 10 ಸಾವಿರ ಹಾಗೂ ಫಲಕವನ್ನು ಒಳಗೊಂಡಿದೆ.ಈ ಹೊತ್ತಿಗೆ ಕಥಾ ಸ್ಪರ್ಧೆಯ ಫಲಿತಾಂಶವೂ ಪ್ರಕಟವಾಗಿದೆ. ತುಮಕೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಎಂ. ಕಲ್ಲೂರು ಅವರ ‘ಒಂಟಿ ನಕ್ಷತ್ರ ಗುಳೆ ಹೋದ ದಿವಸ’ ಕಥೆಯು ಪ್ರಥಮ ಬಹುಮಾನ ಪಡೆದಿದ್ದು, ₹ 5 ಸಾವಿರ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿದ್ಯಾರ್ಥಿ ಕಪಿಲ ಪಿ. ಹುಮನಾಬಾದೆ ಅವರ ‘ಬಿಸಿಲು’ ಕಥೆಗೆ ದ್ವಿತೀಯ ಬಹುಮಾನ (₹ 3 ಸಾವಿರ ನಗದು),ಬೆಂಗಳೂರಿನ ಶಿಕ್ಷಕ ದಾದಾಪೀರ್ ಜೈಮನ್ ಅವರ ‘ಎಲ್ಲೋ ಯಲ್ಲೋ...’ ಕಥೆ ತೃತೀಯ ಬಹುಮಾನ (₹ 2 ಸಾವಿರ ನಗದು) ಪಡೆದಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಬಸನಗೌಡ ಪಾಟೀಲ ಅವರ ‘ಮೈಲಿಗೆ ಗುಡಿಸಲು’ ಮತ್ತು ಪುತ್ತೂರಿನ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ವಿಶ್ವನಾಥ ಅವರ ‘ಋಣ’ ಮೆಚ್ಚುಗೆ ಪಡೆದ ಕಥೆಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>