ಗುಲಬರ್ಗಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿದ್ಯಾರ್ಥಿ ಕಪಿಲ ಪಿ. ಹುಮನಾಬಾದೆ ಅವರ ‘ಬಿಸಿಲು’ ಕಥೆಗೆ ದ್ವಿತೀಯ ಬಹುಮಾನ (₹ 3 ಸಾವಿರ ನಗದು),ಬೆಂಗಳೂರಿನ ಶಿಕ್ಷಕ ದಾದಾಪೀರ್ ಜೈಮನ್ ಅವರ ‘ಎಲ್ಲೋ ಯಲ್ಲೋ...’ ಕಥೆ ತೃತೀಯ ಬಹುಮಾನ (₹ 2 ಸಾವಿರ ನಗದು) ಪಡೆದಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಬಸನಗೌಡ ಪಾಟೀಲ ಅವರ ‘ಮೈಲಿಗೆ ಗುಡಿಸಲು’ ಮತ್ತು ಪುತ್ತೂರಿನ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ವಿಶ್ವನಾಥ ಅವರ ‘ಋಣ’ ಮೆಚ್ಚುಗೆ ಪಡೆದ ಕಥೆಗಳಾಗಿವೆ.