ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹರಾಂನ ಕಥೆಗಳು’ ಕೃತಿಗೆ ಪ್ರಶಸ್ತಿ

ಕಥಾ ಸ್ಪರ್ಧೆಯಲ್ಲಿ ‘ಒಂಟಿ ನಕ್ಷತ್ರ ಗುಳೆ ಹೋದ ದಿವಸ’ ಕಥೆಗೆ ಪ್ರಥಮ ಬಹುಮಾನ
Last Updated 21 ಜನವರಿ 2020, 20:01 IST
ಅಕ್ಷರ ಗಾತ್ರ

ಬೆಂಗಳೂರು:ಕೊಡಗಿನ ಕೆ.ಎಚ್.ಮುಸ್ತಫಾ ‌ಅವರ ಅಪ್ರಕಟಿತ ಕಥಾ ಸಂಕಲನ ‘ಹರಾಂನ ಕಥೆಗಳು’ 2019ರ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಆಯ್ಕೆಯಾಗಿದೆ.

ಈ ಪ್ರಶಸ್ತಿಯು ₹ 10 ಸಾವಿರ ಹಾಗೂ ಫಲಕವನ್ನು ಒಳಗೊಂಡಿದೆ.ಈ ಹೊತ್ತಿಗೆ ಕಥಾ ಸ್ಪರ್ಧೆಯ ಫಲಿತಾಂಶವೂ ಪ್ರಕಟವಾಗಿದೆ. ತುಮಕೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಎಂ. ಕಲ್ಲೂರು ಅವರ ‘ಒಂಟಿ ನಕ್ಷತ್ರ ಗುಳೆ ಹೋದ ದಿವಸ’ ಕಥೆಯು ಪ್ರಥಮ ಬಹುಮಾನ ಪಡೆದಿದ್ದು, ₹ 5 ಸಾವಿರ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿದ್ಯಾರ್ಥಿ ಕಪಿಲ ಪಿ. ಹುಮನಾಬಾದೆ ಅವರ ‘ಬಿಸಿಲು’ ಕಥೆಗೆ ದ್ವಿತೀಯ ಬಹುಮಾನ (₹ 3 ಸಾವಿರ ನಗದು),ಬೆಂಗಳೂರಿನ ಶಿಕ್ಷಕ ದಾದಾಪೀರ್ ಜೈಮನ್ ಅವರ ‘ಎಲ್ಲೋ ಯಲ್ಲೋ...’ ಕಥೆ ತೃತೀಯ ಬಹುಮಾನ (₹ 2 ಸಾವಿರ ನಗದು) ಪಡೆದಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಬಸನಗೌಡ ಪಾಟೀಲ ಅವರ ‘ಮೈಲಿಗೆ ಗುಡಿಸಲು’ ಮತ್ತು ಪುತ್ತೂರಿನ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ವಿಶ್ವನಾಥ ಅವರ ‘ಋಣ’ ಮೆಚ್ಚುಗೆ ಪಡೆದ ಕಥೆಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT