<p><strong>ಬೆಂಗಳೂರು: </strong>‘ಆಂದೋಲನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ರಾಷ್ಟ ವಿರೋಧಿ ಪ್ರವೃತ್ತಿಯ ಆಂದೋಲನಗಳಲ್ಲಿ ಪಾಲ್ಗೊಳ್ಳುವವರು ದೇಶದ್ರೋಹಿಗಳು’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಪಾದಿಸಿದರು.</p>.<p>ಪುರಭವನದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಹಕ್ಕುಗಳನ್ನು ಪ್ರತಿಪಾದಿಸುವ ಜತೆಗೆ ತನ್ನ ಕರ್ತವ್ಯವನ್ನೂ ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಕರ್ತವ್ಯಕ್ಕಿಂತ ಆಂದೋಲನಗಳು ಹೆಚ್ಚಾಗುತ್ತಿವೆ. ಹೋರಾಟಗಳು ರಾಷ್ಟ್ರವನ್ನು ಸದೃಢಗೊಳಿಸುವಂತೆ ಇರಬೇಕೇ ಹೊರತು ವಿಭಜನೆ ಮಾಡುವಂತಿರಬಾರದು. ಈ ಮಾತನ್ನು ಮಹಾತ್ಮ ಗಾಂಧೀಜಿ ಸಹಾ ಹೇಳುತ್ತಿದ್ದರು’ ಎಂದರು.</p>.<p>‘ಜಾತಿ, ಪಂಥ, ಪಕ್ಷಕ್ಕಾಗಿ ಅಥವಾ ಯಾವುದೋ ವ್ಯಕ್ತಿಯ ಮಹತ್ವಾಕಾಂಕ್ಷೆ ಈಡೇರಿಸಿಕೊಳ್ಳಲು ಇಂದು ಆಂದೋಲನಗಳು ನಡೆಯುತ್ತಿವೆ. ಆ ರೀತಿಯ ಆಂದೋಲನಗಳಲ್ಲಿ ಪಾಲ್ಗೊಳ್ಳಬೇಡಿ' ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>'ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಅವರು ಇಡೀ ಜೀವನವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟರು. ಅವರಿಂದ ನಾವು ಪ್ರೇರಣೆ ಪಡೆಯಬೇಕು. ದೇಶಕ್ಕಾಗಿ ಬದುಕೋಣ, ದೇಶಕ್ಕಾಗಿ ದುಡಿಯೋಣ, ಅಗತ್ಯ ಬಿದ್ದರೆ ದೇಶಕ್ಕಾಗಿ ಪ್ರಾಣವನ್ನೂ ತ್ಯಾಗ ಮಾಡೋಣ’ ಎಂದರು.</p>.<p>ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ‘ಸದೃಢ ಭಾರತ ನಿರ್ಮಾಣದಲ್ಲಿ ಮತದಾರರ ಪಾತ್ರ ದೊಡ್ಡದು. ಮತದಾನದಿಂದ ಯಾರೊಬ್ಬರೂ ಹೊರಗುಳಿಯಬಾರದು. ಎಲ್ಲರನ್ನು ಪಾಲ್ಗೊಳ್ಳುವಂತೆ ಮಾಡಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ಹೇಳಿದರು.</p>.<p>2019ರ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಚುನಾವಣಾ ಆಯೋಗದಿಂದ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಆಂದೋಲನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ರಾಷ್ಟ ವಿರೋಧಿ ಪ್ರವೃತ್ತಿಯ ಆಂದೋಲನಗಳಲ್ಲಿ ಪಾಲ್ಗೊಳ್ಳುವವರು ದೇಶದ್ರೋಹಿಗಳು’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಪಾದಿಸಿದರು.</p>.<p>ಪುರಭವನದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಹಕ್ಕುಗಳನ್ನು ಪ್ರತಿಪಾದಿಸುವ ಜತೆಗೆ ತನ್ನ ಕರ್ತವ್ಯವನ್ನೂ ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಕರ್ತವ್ಯಕ್ಕಿಂತ ಆಂದೋಲನಗಳು ಹೆಚ್ಚಾಗುತ್ತಿವೆ. ಹೋರಾಟಗಳು ರಾಷ್ಟ್ರವನ್ನು ಸದೃಢಗೊಳಿಸುವಂತೆ ಇರಬೇಕೇ ಹೊರತು ವಿಭಜನೆ ಮಾಡುವಂತಿರಬಾರದು. ಈ ಮಾತನ್ನು ಮಹಾತ್ಮ ಗಾಂಧೀಜಿ ಸಹಾ ಹೇಳುತ್ತಿದ್ದರು’ ಎಂದರು.</p>.<p>‘ಜಾತಿ, ಪಂಥ, ಪಕ್ಷಕ್ಕಾಗಿ ಅಥವಾ ಯಾವುದೋ ವ್ಯಕ್ತಿಯ ಮಹತ್ವಾಕಾಂಕ್ಷೆ ಈಡೇರಿಸಿಕೊಳ್ಳಲು ಇಂದು ಆಂದೋಲನಗಳು ನಡೆಯುತ್ತಿವೆ. ಆ ರೀತಿಯ ಆಂದೋಲನಗಳಲ್ಲಿ ಪಾಲ್ಗೊಳ್ಳಬೇಡಿ' ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>'ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಅವರು ಇಡೀ ಜೀವನವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟರು. ಅವರಿಂದ ನಾವು ಪ್ರೇರಣೆ ಪಡೆಯಬೇಕು. ದೇಶಕ್ಕಾಗಿ ಬದುಕೋಣ, ದೇಶಕ್ಕಾಗಿ ದುಡಿಯೋಣ, ಅಗತ್ಯ ಬಿದ್ದರೆ ದೇಶಕ್ಕಾಗಿ ಪ್ರಾಣವನ್ನೂ ತ್ಯಾಗ ಮಾಡೋಣ’ ಎಂದರು.</p>.<p>ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ‘ಸದೃಢ ಭಾರತ ನಿರ್ಮಾಣದಲ್ಲಿ ಮತದಾರರ ಪಾತ್ರ ದೊಡ್ಡದು. ಮತದಾನದಿಂದ ಯಾರೊಬ್ಬರೂ ಹೊರಗುಳಿಯಬಾರದು. ಎಲ್ಲರನ್ನು ಪಾಲ್ಗೊಳ್ಳುವಂತೆ ಮಾಡಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ಹೇಳಿದರು.</p>.<p>2019ರ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಚುನಾವಣಾ ಆಯೋಗದಿಂದ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>