‘ಈಗಾಗಲೇ ಬಹಳಷ್ಟು ಮಕ್ಕಳು ಪರೀಕ್ಷೆಗೆ ತಯಾರಾಗಿದ್ದಾರೆ. ಪರಿಸ್ಥಿತಿ ಅವಲೋಕಿಸಿ 14ರ ನಂತರ ಹೊಸ ವೇಳಾಪಟ್ಟಿ ಘೋಷಣೆ ಮಾಡಲಾಗುವುದು. ಪರೀಕ್ಷೆ ಮುಂದೂಡಿರುವುದರಿಂದ ಯಾರೂ ನಿರಾಶರಾಗಬಾರದು. ಕೊರೊನಾ ಸೋಂಕಿನ ವಿರುದ್ಧ ಹೋರಾಡುವುದೂ ಒಂದು ಪರೀಕ್ಷೆಯಾಗಿದೆ. ಯಾರೂ ಮನೆಯಿಂದ ಹೊರಬರಬಾರದು. ಪ್ರತಿನಿತ್ಯ ಇನ್ನಷ್ಟು ಪುಸ್ತಕಗಳನ್ನು ಓದಿ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು. ಮಕ್ಕಳ ಆತಂಕದ ಬಗ್ಗೆ ತಿಳಿದಿದ್ದು, ಸರ್ಕಾರ ಅವರ ಜೊತೆ ಯಾವಾಗಲೂ ಇರುತ್ತದೆ’ ಎಂದರು.