‘ಕಾರಣ ಏನೇ ಇದ್ದರೂ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವ ನಿರ್ಧಾರ ಒಳಿತಲ್ಲ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದರೂ ತೆಗೆದುಕೊಂಡಿರುವ ನಿರ್ಧಾರ ಸರಿಯಲ್ಲ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ವ್ಯತ್ಯಾಸಗಳು ಮಕ್ಕಳ ಮೇಲೆ ವಿಪರೀತ ಪರಿಣಾಮ ಬೀರಬಾರದು. ಈ ಸಮಸ್ಯೆಗಳು ನಮ್ಮ ಸರ್ಕಾರ ಬಂದ ನಂತರ ಉದ್ಭವಿಸಿಲ್ಲ. ಅನೇಕ ವರ್ಷಗಳಿಂದ ಚರ್ಚೆಗಳಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸಲು ಅಪಾರ ಪ್ರಮಾಣದ ಹಣವೂ ಬೇಕಾಗುತ್ತದೆ ಎಂಬುದು ನಿಮಗೂ ಗೊತ್ತಿದೆ’ ಎಂದು ಹೇಳಿದ್ದಾರೆ.