ಟಿಪ್ಪು ಜಯಂತಿ ಆಚರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮಲ್ಲಿ ಯಾರ ಮೈಯಲ್ಲೂ ಟಿಪ್ಪು ರಕ್ತ ಹರಿಯುತ್ತಿಲ್ಲ. ಬದಲಿಗೆ ಭಾರತಾಂಬೆ, ಸ್ವಾತಂತ್ರ್ಯ ಹೋರಾಟಗಾರರ ರಕ್ತ ಹರಿಯುತ್ತಿದೆ. ಆದ್ರೆ ಯಾಕೆ ಸರ್ಕಾರ ಈ ವಿಚಾರವನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ ಅನ್ನೋದು ನನಗೆ ಗೊತ್ತಾಗುತ್ತಿಲ್ಲ.ಟಿಪ್ಪು ಜಯಂತಿ ಆಚರಣೆ ಆರಂಭದಿಂದಲೂ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.