‘ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ವೇಳೆ ಹೆಲಿಕಾಪ್ಟರ್ನಿಂದ ಕೆಳಗಿಳಿಸಿದ ‘ಕಪ್ಪು ಬಣ್ಣದ ಪೆಟ್ಟಿಗೆ’ಯ ಕುರಿತು ಅಲ್ಲಿನಜಿಲ್ಲಾ ಚುನಾವಣಾಧಿಕಾರಿ ತನಿಖೆ ನಡೆಸಿ, ವರದಿ ಸಲ್ಲಿಸಿದ್ದಾರೆ. ಅದರಲ್ಲಿ ಭದ್ರತಾ ಸಲಕರಣೆಗಳು ಹಾಗೂ ಇತರೆ ಸಾಮಗ್ರಿಗಳಲ್ಲಿದ್ದವು,ಮೈಸೂರಿನಲ್ಲಿ ಕಾರ್ಯಕ್ರಮವಿದ್ದುದ್ದರಿಂದ ಅಲ್ಲಿಗೆ ತೆಗೆದುಕೊಂಡು ಹೋಗಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ’ ಎಂದು ಸಂಜೀವ್ ಕುಮಾರ್ ಹೇಳಿದರು.