ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಅಶೋಕ್ ಲಾವಸ ಜಿಲ್ಲೆಗೆ ಸೋಮವಾರ ಭೇಟಿ ನೀಡಿದ್ದು, ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳಜೊತೆ ಸಂಜೆ ಸಭೆ ನಡೆಸಲಿದ್ದಾರೆ.
ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್ ಮನೋಹರ್ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಯುಕ್ತರನ್ನು ಕಮಲಾಪುರದಲ್ಲಿ ಬರಮಾಡಿಕೊಂಡರು.
ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಲೋಕಸಭೆ ಉಪಚುನಾವಣೆ ನಡೆದು, ವಿ.ಎಸ್.ಉಗ್ರಪ್ಪ ಆಯ್ಕೆಯಾಗಿದ್ದರು. ಹೊಸ ವರ್ಷದ ಮುನ್ನಾ ದಿನವೇ ಆಯುಕ್ತರು ಜಿಲ್ಲೆಗೆ ಭೇಟಿ ನೀಡಿ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲಿರುವುದು ಕುತೂಹಲ ಮೂಡಿಸಿದೆ.