ಈ ಮಧ್ಯೆ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಸದಸ್ಯರ ಅಧಿಕಾರವಧಿಯನ್ನು ವಿಸ್ತರಿಸುವ ಪ್ರಸ್ತಾವ ಮುಂದಿಟ್ಟಿದ್ದವು.
ಹೀಗಿರುವಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಾಧ್ಯವೇ ಎಂಬುದರ ಕುರಿತು ವಿವರಣೆ ಕೋರಿದೆ.