ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಮಸೂದೆ ತಿದ್ದುಪಡಿಗೆ ಕಾಂಗ್ರೆಸ್‌ ವಿರೋಧ

Last Updated 25 ಮೇ 2020, 20:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ತರಲು ಹೊರಟಿರುವ 2020ರ ವಿದ್ಯುತ್‌ (ತಿದ್ದುಪಡಿ) ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

‘ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾದ ವಿದ್ಯುತ್‌ ಕಂಪನಿಗಳ ಉದ್ಯಮಿ ಗೌತಮ್‌ ಅದಾನಿ ಹಾಗೂ ಇತರರಿಗೆ ಲಾಭ ಮಾಡಿಕೊಡಲು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ಈ ಕಾಯ್ದೆಯ ಜಾರಿಗೆ ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.

‘ಈಗ ಕೃಷಿ ಕ್ಷೇತ್ರಕ್ಕೆ (ರೈತರ ಪಂಪ್‌ಸೆಟ್‌ಗಳಿಗೆ) ಉಚಿತವಾಗಿ ವಿದ್ಯುತ್‌ ಪೂರೈಸಲಾಗುತ್ತಿದೆ. ಈ ಮಸೂದೆಯಿಂದ ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ ಬಳಕೆಗೂ ಶುಲ್ಕ ಕಟ್ಟಬೇಕಾಗುತ್ತದೆ. ಇದು ರೈತ ವಿರೋಧಿ ಮಸೂದೆ’ ಎಂದುಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಮೀಗಾ ದೂರಿದ್ದಾರೆ.

‘ಕೃಷಿ ಮತ್ತು ಇಂಧನ ಕ್ಷೇತ್ರ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಈ ಮಸೂದೆಗೆ ಒಪ್ಪಿಗೆ ಸೂಚಿಸಬಾರದು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT