ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ದಾಳಿ: ಯುವಕನಿಗೆ ಗಾಯ

Last Updated 1 ಮೇ 2019, 20:00 IST
ಅಕ್ಷರ ಗಾತ್ರ

ಮಾಲೂರು: ತಾಲ್ಲೂಕಿನ ಅರಳೇರಿ ಗ್ರಾಮದ ಬಳಿ ಬುಧವಾರ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು ರಾಜಪ್ಪ (28) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲವು ದಿನಗಳಿಂದ ತಾಲ್ಲೂಕಿನಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಬಂಟಹಳ್ಳಿ, ಡಿ.ಎನ್.ದೊಡ್ಡಿ ಗ್ರಾಮಗಳ ಬಳಿ ಕಾಣಿಸಿಕೊಂಡಿದ್ದ ಆರು ಆನೆಗಳನ್ನು ಅರಣ್ಯ ಇಲಾಖೆ ಅಧಿಕಾರಿ ಧನಲಕ್ಷ್ಮಿ ಮತ್ತು ಸಿಬ್ಬಂದಿ ತಮಿಳುನಾಡು ಅರಣ್ಯದತ್ತ ಓಡಿಸಿದ್ದರು. ಬುಧವಾರ ಮುಂಜಾನೆ ಮತ್ತೆ ಅರಳೇರಿ ಗ್ರಾಮದ ಬಳಿ ಇದೇ ಹಿಂಡು ಕಾಣಿಸಿಕೊಂಡಿದೆ.

ರೈತ ರಾಜಪ್ಪ ಅವರ ಜಮೀನಿನತ್ತ ಆನೆಗಳು ನುಗ್ಗಿದ್ದು ಈ ವೇಳೆ ಅಲ್ಲಿದ್ದ ಅವರ ಮೇಲೆ ದಾಳಿ ನಡೆಸಿವೆ. ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT