ಬಳಿಕ ಸ್ಥಳಕ್ಕೆ ಬಂದ ಸಿಸಿಎಫ್ ಸಂತೋಷ್, ‘ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಮೃತರ ಕುಟುಂಬಕ್ಕೆ 5 ವರ್ಷಗಳವರೆಗೆ ಮಾಸಿಕ ₹ 2,000 ಸಹಾಯಧನ ಸಿಗಲಿದೆ. ಹೆಚ್ಚಿನ ಮೊತ್ತದ ಪರಿಹಾರಕ್ಕೆ ಶೀಘ್ರದಲ್ಲಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.