<p><strong>ಪೊನ್ನಂಪೇಟೆ:</strong> ಇಲ್ಲಿನ ಕಾಯಿಮಾನಿ ಗ್ರಾಮದಲ್ಲಿ ಕೃಷಿಕ ಚೋಕೀರ ಸುಧಾ (45) ಅವರು ಗುರುವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸಮಯದಲ್ಲಿ ಹೆದ್ದಾರಿ ಪಕ್ಕದಲ್ಲಲಿ ಕಾಡಾನೆಯೊಂದು ದಾಳಿ ನಡೆಸಿ ಕೊಂದು ಹಾಕಿದೆ.</p>.<p>ಘಟನೆ ಖಂಡಿಸಿ ನೂರಾರು ಮಂದಿ ರೈತರು ಮೃತದೇಹವನ್ನು ಇಟ್ಟು ಶ್ರೀಮಂಗಲದಿಂದ ಕೇರಳಕ್ಕೆ ತೆರಳುವ ಅಂತರರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಮಧ್ಯಾಹ್ನದವರೆಗೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಡಿಸಿಎಫ್ ಮಂಜುನಾಥ್ ಅವರು ಸ್ಥಳಕ್ಕೆ ಬಂದು ಸಮಾಧಾನಪಡಿಸಲೆತ್ನಿಸಿದರೂ ರೈತರು ಪ್ರತಿಭಟನೆಯನ್ನು ವಾಪಸ್ ಪಡೆಯಲಿಲ್ಲ.</p>.<p>ಬಳಿಕ ಸ್ಥಳಕ್ಕೆ ಬಂದ ಸಿಸಿಎಫ್ ಸಂತೋಷ್, ‘ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಮೃತರ ಕುಟುಂಬಕ್ಕೆ 5 ವರ್ಷಗಳವರೆಗೆ ಮಾಸಿಕ ₹ 2,000 ಸಹಾಯಧನ ಸಿಗಲಿದೆ. ಹೆಚ್ಚಿನ ಮೊತ್ತದ ಪರಿಹಾರಕ್ಕೆ ಶೀಘ್ರದಲ್ಲಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p><strong>ಮೈಸೂರಿನ ಸಮೀಪದಲ್ಲಿ ಕಾಡಾನೆಗಳು:</strong></p>.<p>ಮೈಸೂರು ನಗರಕ್ಕೆ 18 ಕಿ.ಮೀ ದೂರದ ಜಯಪುರದ ಸಮೀಪ 2 ಕಾಡಾನೆಗಳು ಬೀಡುಬಿಟ್ಟಿವೆ. ಸಾಕಾನೆಗಳಾದ ‘ಅಭಿಮನ್ಯು’ ಮತ್ತು ‘ಕೃಷ್ಣ’ ಆನೆಗಳ ಸಹಾಯದಿಂದ ನೂರಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಯತ್ನಿಸಿದರೂ ಕಾಡಾನೆಗಳು ರಾತ್ರಿ ವೇಳೆ ಮರಳಿ ರೈತರ ತೋಟಗಳಿಗೆ ದಾಳಿ ಮಾಡುತ್ತಿವೆ. ಮತ್ತೆ 3 ಸಾಕಾನೆಗಳನ್ನು ಕರೆಸಲು ತೀರ್ಮಾನಿಸಲಾಗಿದ್ದು, ಇನ್ನೆರಡು ದಿನಗಳ ನಂತರ ಆನೆಗಳ ಸೆರೆಗೆ ಚಿಂತನೆ ನಡೆಸಲಾಗುವುದು’ ಎಂದು ಡಿಸಿಎಫ್ ಡಾ.ಪ್ರಶಾಂತ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೊನ್ನಂಪೇಟೆ:</strong> ಇಲ್ಲಿನ ಕಾಯಿಮಾನಿ ಗ್ರಾಮದಲ್ಲಿ ಕೃಷಿಕ ಚೋಕೀರ ಸುಧಾ (45) ಅವರು ಗುರುವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸಮಯದಲ್ಲಿ ಹೆದ್ದಾರಿ ಪಕ್ಕದಲ್ಲಲಿ ಕಾಡಾನೆಯೊಂದು ದಾಳಿ ನಡೆಸಿ ಕೊಂದು ಹಾಕಿದೆ.</p>.<p>ಘಟನೆ ಖಂಡಿಸಿ ನೂರಾರು ಮಂದಿ ರೈತರು ಮೃತದೇಹವನ್ನು ಇಟ್ಟು ಶ್ರೀಮಂಗಲದಿಂದ ಕೇರಳಕ್ಕೆ ತೆರಳುವ ಅಂತರರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಮಧ್ಯಾಹ್ನದವರೆಗೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಡಿಸಿಎಫ್ ಮಂಜುನಾಥ್ ಅವರು ಸ್ಥಳಕ್ಕೆ ಬಂದು ಸಮಾಧಾನಪಡಿಸಲೆತ್ನಿಸಿದರೂ ರೈತರು ಪ್ರತಿಭಟನೆಯನ್ನು ವಾಪಸ್ ಪಡೆಯಲಿಲ್ಲ.</p>.<p>ಬಳಿಕ ಸ್ಥಳಕ್ಕೆ ಬಂದ ಸಿಸಿಎಫ್ ಸಂತೋಷ್, ‘ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಮೃತರ ಕುಟುಂಬಕ್ಕೆ 5 ವರ್ಷಗಳವರೆಗೆ ಮಾಸಿಕ ₹ 2,000 ಸಹಾಯಧನ ಸಿಗಲಿದೆ. ಹೆಚ್ಚಿನ ಮೊತ್ತದ ಪರಿಹಾರಕ್ಕೆ ಶೀಘ್ರದಲ್ಲಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p><strong>ಮೈಸೂರಿನ ಸಮೀಪದಲ್ಲಿ ಕಾಡಾನೆಗಳು:</strong></p>.<p>ಮೈಸೂರು ನಗರಕ್ಕೆ 18 ಕಿ.ಮೀ ದೂರದ ಜಯಪುರದ ಸಮೀಪ 2 ಕಾಡಾನೆಗಳು ಬೀಡುಬಿಟ್ಟಿವೆ. ಸಾಕಾನೆಗಳಾದ ‘ಅಭಿಮನ್ಯು’ ಮತ್ತು ‘ಕೃಷ್ಣ’ ಆನೆಗಳ ಸಹಾಯದಿಂದ ನೂರಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಯತ್ನಿಸಿದರೂ ಕಾಡಾನೆಗಳು ರಾತ್ರಿ ವೇಳೆ ಮರಳಿ ರೈತರ ತೋಟಗಳಿಗೆ ದಾಳಿ ಮಾಡುತ್ತಿವೆ. ಮತ್ತೆ 3 ಸಾಕಾನೆಗಳನ್ನು ಕರೆಸಲು ತೀರ್ಮಾನಿಸಲಾಗಿದ್ದು, ಇನ್ನೆರಡು ದಿನಗಳ ನಂತರ ಆನೆಗಳ ಸೆರೆಗೆ ಚಿಂತನೆ ನಡೆಸಲಾಗುವುದು’ ಎಂದು ಡಿಸಿಎಫ್ ಡಾ.ಪ್ರಶಾಂತ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>