ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಮುಳುಗಿ ಮರಿಯಾನೆ ಸಾವು

Last Updated 26 ಜೂನ್ 2019, 19:13 IST
ಅಕ್ಷರ ಗಾತ್ರ

ಕುಶಾಲನಗರ: ಅತ್ತೂರು ಮೀಸಲು ಅರಣ್ಯ ವ್ಯಾಪ್ತಿಯ, ಮೈಸೂರು–ಮಡಿಕೇರಿ ಹೆದ್ದಾರಿ ಪಕ್ಕದ ಕೆರೆಗೆ ಇಳಿದಿದ್ದ ಒಂದು ತಿಂಗಳ ಗಂಡು ಮರಿಯಾನೆಯೊಂದು, ನೀರಿನಲ್ಲಿ ಮುಳುಗಿ ಮಂಗಳವಾರ ರಾತ್ರಿ ಮೃತಪಟ್ಟಿದೆ.

ತಾಯಿ ಆನೆ ಹಾಗೂ ಹಿಂಡಾನೆಗಳ ಜೊತೆಗೆ ಕೆರೆಗೆ ಇಳಿದಿದ್ದ ಮರಿಯಾನೆ ಕೆಸರಿನಲ್ಲಿ ಸಿಲುಕಿಹಾಕಿಕೊಂಡಿದೆ. ಇದರಿಂದ ಆಘಾತಗೊಂಡ ಆನೆಗಳು ರಾತ್ರಿಯಿಡೀ ಘೀಳಿಡುತ್ತಾ ಕೆರೆ ಬಳಿ ಕಾವಲು ಕಾದಿವೆ. ಬುಧವಾರ ಬೆಳಿಗ್ಗೆ ಹೊತ್ತಿಗೆ ಮರಿಯಾನೆಯನ್ನು ಬಿಟ್ಟು ಕಾಡಿಗೆ ಹೋಗಿವೆ.

ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರೂ ಹಾಗೂ ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹುಣಸೂರು ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಡಾ.ಮುಜೀಬ್ ಮರಣೋತ್ತರ ಪರೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT