ಜಿಲ್ಲೆಯಲ್ಲೂ ಬೇಸಿಗೆ ಬೇಗೆ ಹೆಚ್ಚಾಗುತ್ತಿದ್ದು ಅರಣ್ಯ ಪ್ರದೇಶದಲ್ಲಿದ್ದ ಕೆರೆಗಳಲ್ಲಿ ನೀರು ಕಡಿಮೆಯಾಗಿದೆ. ಕಾಡಾನೆಗಳಿಗೆ ಅರಣ್ಯದಲ್ಲಿ ನೀರು ಲಭ್ಯವಾಗುತ್ತಿಲ್ಲ. ಹದಿನೈದು ದಿನಗಳ ಹಿಂದೆಯೂ ದಾಹ ನೀಗಿಸಿಕೊಳ್ಳಲು ಚೇಲಾವರ ಗ್ರಾಮದ ಕಾಫಿ ತೋಟದ ಕೆರೆಗೆ ಬಂದಿದ್ದ ಮೂರು ಆನೆಗಳು ನೀರಿನಲ್ಲಿ ಸಿಲುಕಿ ಮೇಲೆ ಬರಲು ಸಾಧ್ಯವಾಗದೇ ಪರದಾಡಿದ್ದವು. ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನೂ ರಕ್ಷಣೆ ಮಾಡಿದ್ದರು.