ಭದ್ರಾ ಅಭಯಾರಣ್ಯದಿಂದ ದಾರಿ ತಪ್ಪಿ, ಆರು ದಿನಗಳ ಹಿಂದೆ ಚಿತ್ರದುರ್ಗಕ್ಕೆ ಬಂದಿದ್ದ ಸಲಗ ಅಹೋಬಲ ನರಸಿಂಹಸ್ವಾಮಿ ಬೆಟ್ಟದಲ್ಲಿತ್ತು. ರಾತ್ರಿ ಜಮೀನಿಗೆ ನುಗ್ಗಿ ಕಾಡಿಗೆ ಮರಳುತ್ತಿದ್ದ ಸಲಗವನ್ನು ಆನೆ ಕಾರಿಡಾರ್ಗೆ ಮರಳಿಸುವ ಪ್ರಯತ್ನ ನಡೆದಿತ್ತು. ಇದು ಅಸಾಧ್ಯ ಎಂಬುದು ಮನದಟ್ಟಾದ ಬಳಿಕ ಸೆರೆ ಹಿಡಿಯಲು ನಿರ್ಧರಿಸಲಾಗಿತ್ತು.