ಜಾವಿದ್ ಅವರು 2018ರ ಫೆ.12ರಂದು ಹುತಾತ್ಮರಾಗಿದ್ದರು. ವಿಧಾನಸಭೆ ಚುನಾವಣೆ ಘೋಷಣೆ ಯಾಗಿ ನೀತಿ ಸಂಹಿತೆ ಜಾರಿಯಲ್ಲಿತ್ತು. ‘ಯೋಧನ ಕುಟುಂಬಕ್ಕೆ ರಾಜ್ಯ ಸರ್ಕಾರ ₹ 10 ಲಕ್ಷ ನೀಡಬೇಕು. ಯೋಧನ ಪತ್ನಿ ಪದವೀಧರೆಯಾಗಿದ್ದು, ಆಕೆಗೆ ಕೆಲಸ ನೀಡಬೇಕು’ ಎಂದು ಆಗ ಅವರ ಮನೆಗೆ ಭೇಟಿ ನೀಡಿದ್ದ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಆಗ್ರಹಿಸಿದ್ದರು.